ADVERTISEMENT

ಮಡಿಕೇರಿ: ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2023, 4:41 IST
Last Updated 19 ಫೆಬ್ರುವರಿ 2023, 4:41 IST
ಗೋಣಿಕೊಪ್ಪಲಿನಲ್ಲಿ ನಡೆಯಲಿರುವ 16ನೇ ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶಾಸಕ ಕೆ.ಜಿ.ಬೋಪಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು. ಪರಿಷತ್ತಿನ ಸಮ್ಮೇಳನದ ಹಣಕಾಸು ಸಮಿತಿ ಸಂಚಾಲಕ ಬಿ.ಎನ್. ಪ್ರಕಾಶ್, ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ಅಧ್ಯಕ್ಷ ಎಂ.ಪಿ.ಕೇಶವಕಾಮತ್, ರೇವತಿ ರಮೇಶ್ ಇದ್ದರು
ಗೋಣಿಕೊಪ್ಪಲಿನಲ್ಲಿ ನಡೆಯಲಿರುವ 16ನೇ ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶಾಸಕ ಕೆ.ಜಿ.ಬೋಪಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು. ಪರಿಷತ್ತಿನ ಸಮ್ಮೇಳನದ ಹಣಕಾಸು ಸಮಿತಿ ಸಂಚಾಲಕ ಬಿ.ಎನ್. ಪ್ರಕಾಶ್, ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ಅಧ್ಯಕ್ಷ ಎಂ.ಪಿ.ಕೇಶವಕಾಮತ್, ರೇವತಿ ರಮೇಶ್ ಇದ್ದರು   

ಮಡಿಕೇರಿ: ಇಲ್ಲಿನ ಗೋಣಿಕೊಪ್ಪಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಾರ್ಚ್ 4 ಮತ್ತು 5ರಂದು ನಡೆಯಲಿರುವ 16ನೇ ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಕೆ.ಜಿ.ಬೋಪಯ್ಯ ಅವರು ಅನಾವರಣಗೊಳಿಸಿದರು.

ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಮಾತನಾಡಿದ ಅವರು, ‘ನೂತನ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮೊದಲ ಬಾರಿ ಜಿಲ್ಲಾ ಸಮ್ಮೇಳನ ನಡೆಯುತ್ತಿದ್ದು, ಇದು ಕನ್ನಡಿಗರ ಹಬ್ಬವಾಗಿದೆ. ಎಲ್ಲಾ ಸಂಘ ಸಂಸ್ಥೆಗಳ, ಸಮುದಾಯಗಳ, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಕನ್ನಡ ಅಭಿಮಾನಿಗಳು, ಸರ್ಕಾರಿ ಅಧಿಕಾರಿಗಳು ಸೇರಿ ಉತ್ತಮವಾದಂತಹ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂದೇಶ ನೀಡುವಂತಹ ಸಮ್ಮೇಳನ ಇದಾಗಬೇಕು’ ಎಂದು ಹೇಳಿದರು.

ಈ ಲಾಂಛನವನ್ನು ಜಿಲ್ಲೆಯ ಹಿರಿಯ ಚಿತ್ರ ಕಲಾವಿದ ಬಿ.ಆರ್.ಸತೀಶ್ ಅವರು ರಚಿಸಿದ್ದು, ಲಾಂಛನದಲ್ಲಿ ಜಿಲ್ಲೆಯ ಪರಿಸರ, ಕೃಷಿ, ಪ್ರವಾಸೋದ್ಯಮ, ಸಾಹಿತ್ಯ ಸೇರಿದಂತೆ ಎಲ್ಲಾ ವಿಚಾರಗಳನ್ನು ಒಳಪಡಿಸಿರುವುದು ವಿಶೇಷ ಆಕರ್ಷಕ ಲಾಂಛನ ಎನಿಸಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಹೇಳಿದರು.

ADVERTISEMENT

ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ರೇವತಿ ರಮೇಶ್, ಸಮ್ಮೇಳನದ ಹಣಕಾಸು ಸಮಿತಿ ಸಂಚಾಲಕ ಬಿ.ಎನ್. ಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.