ADVERTISEMENT

ಮಡಿಕೇರಿ: ಗ್ರಾ.ಪಂ ಸದಸ್ಯನಿಂದ ಗುಂಡಿನ ದಾಳಿ, ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2018, 15:49 IST
Last Updated 1 ಅಕ್ಟೋಬರ್ 2018, 15:49 IST
   

ಮಡಿಕೇರಿ: ಗ್ರಾಮ ಪಂಚಾಯಿತಿ ಸದಸ್ಯನೇ ವ್ಯಕ್ತಿಯೊಬ್ಬನ ಮೇಲೆ ಸೋಮವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕೊಲೆಯಾದ ವ್ಯಕ್ತಿ ತಿಲಕ್ ರಾಜ್(40) ಬಿಜೆಪಿ ಕಾರ್ಯಕರ್ತ. ಆರೋಪಿ ಎಂ. ನಂದ ಜೆಡಿಎಸ್ ಕಾರ್ಯಕರ್ತ.

ತಾಲ್ಲೂಕಿನ ಮರಗೋಡು ಗ್ರಾಮ ಪಂಚಾಯಿತಿ ಸದಸ್ಯ ಎಂ. ನಂದ ಗುಂಡು ಹಾರಿಸಿದ್ದು ಆತ ನಾಪತ್ತೆಯಾಗಿದ್ದಾನೆ. ರಾಜಕೀಯ ವೈಷಮ್ಯದಿಂದ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.