ಮಡಿಕೇರಿ: ನಗರದ ಮಹದೇವಪೇಟೆ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಪೊಲೀಸರು ಹಾಗೂ ಜಿಲ್ಲಾಡಳಿತ ಬೀಗಮುದ್ರೆ ಹಾಕಿದೆ.
ಬುಧವಾರ ತಡರಾತ್ರಿ ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಹಾಗೂ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಕಚೇರಿಯ ಮೇಲೆ ದಾಳಿ ನಡೆಸಲಾಯಿತು. ಬೀಗವನ್ನು ಒಡೆದು ಪ್ರವೇಶಿಸಿದ ಅಧಿಕಾರಿಗಳು ಕಚೇರಿಯನ್ನೆಲ್ಲ ಪರಿಶೀಲನೆ ನಡೆಸಿದ ಬಳಿಕ ಬೀಗಮುದ್ರೆ ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.