ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು,ಮೈಸೂರು- ಮಡಿಕೇರಿ ಹೆದ್ದಾರಿ ಜಲಾವೃತಗೊಂಡಿದೆ.
ಗೋಣಿಕೊಪ್ಪಲಿನ ಬಹುತೇಕ ಮನೆಗಳಿಗೆ ಲಕ್ಷ್ಮಣತೀರ್ಥ ಪ್ರವಾಹದ ನೀರು ನುಗ್ಗಿದೆ.ಕಾವೇರಿ ನೀರು, ಮೈಸೂರು- ಮಡಿಕೇರಿ ಹೆದ್ದಾರಿ ಮೇಲೆ ಹರಿಯುತ್ತಿರುವುದರಿಂದ ರಸ್ತೆ ಜಲಾವೃತಗೊಂಡಿದೆ.
ವಿರಾಜಪೇಟೆ ಪಟ್ಟಣಕ್ಕೂ ನೀರು ನುಗ್ಗಿದ್ದುಬಹುತೇಕ ಗ್ರಾಮಗಳು ಕತ್ತಲೆಯಲ್ಲಿ ಮುಳುಗಿವೆ.
ಭಾಗಮಂಡಲದಲ್ಲಿ ಪ್ರವಾಹ ಸ್ಥಿತಿ ಇದೆ.ಭಗಂಡೇಶ್ವರ ದೇಗುಲದ ಒಳಕ್ಕೆ ನೀರು ನುಗ್ಗಿದೆ. ಹಲವು ಗ್ರಾಮಗಳಸಂಪರ್ಕಗಳ ಕಡಿತವಾಗಿದೆ. ಕರಿಕೆ - ಪಾಣತ್ತೂರು ಮಾರ್ಗದಲ್ಲಿ ಭೂಕುಸಿತವಾಗಿರಸ್ತೆ ಬಂದ್ ಆಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.