ADVERTISEMENT

ಮಡಿಕೇರಿ: ಭಗಂಡೇಶ್ಚರ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2023, 9:11 IST
Last Updated 15 ಅಕ್ಟೋಬರ್ 2023, 9:11 IST
   

ಮಡಿಕೇರಿ: ಇಲ್ಲಿನ ತಲಕಾವೇರಿಯಲ್ಲಿ ಅ. 18ರ ನಸುಕಿನಲ್ಲಿ ನಡೆಯುವ ಪವಿತ್ರ ತೀರ್ಥೋದ್ಭವದ ಅಂಗವಾಗಿ‌ ಭಾನುವಾರ ಭಾಗಮಂಡಲದ ಭಗಂಡೇಶ್ಚರ ದೇಗುಲದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ದೇಗುಲದಲ್ಲಿ ಅಕ್ಷಯಪಾತ್ರೆಗೆ ಅಕ್ಕಿ ಹಾಕುವ ಮೂಲಕ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.

ಬಳಿಕ ತಲಕಾವೇರಿಗೆ ಭೇಟಿ ನೀಡಿದ ಅವರು ಸಿದ್ಧತೆಗಳನ್ನು ಪರಿಶೀಲಿಸಿದರು.

ADVERTISEMENT

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತೀರ್ಥೋದ್ಭವದ ವೇಳೆ ಪ್ಲಾಸ್ಟಿಕ್ ನಿಷೇಧಿಸಲಾಗಿದೆ‌. ಈ ಕುರಿತು ಸಾಕಷ್ಟು ಅರಿವು ಮೂಡಿಸಲಾಗಿದೆ. ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.