ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಲೆನಾಡು ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ಬಂದಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಕ್ಷಿತ್ ರವೀಂದ್ರ ತಿಳಿಸಿದರು.
ಶೀಘ್ರದಲ್ಲಿ ಸಂಘಟನೆಗೆ ಪದಾಧಕಾರಿಗಳನ್ನು ನೇಮಕ ಮಾಡಲಾಗುವುದು. ಕನ್ನಡ ಪರ ಹಾಗೂ ರೈತಪರವಾಗಿ ಧ್ವನಿ ಎತ್ತುವ ಕೆಲಸ ಮಾಡಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ನಿವಾರಣೆ ಕಡೆಗೂ ಗಮನ ಕೊಡಲಾಗುವುದು ಎಂದು ಹೇಳಿದರು.
ಮುಖಂಡರಾದ ಯತೀಶ್, ಪೃಥ್ವಿ ಗೌಡಳ್ಳಿ, ಉಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.