ಸೋಮವಾರಪೇಟೆ: ಬೇಳೂರು ಬಾಣೆಯ ಸಮೀಪ ಸ್ಕೂಟರ್ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬುಧವಾರ ಸಂಜೆ ಬಂಧಿಸಿ ₹3000 ಮೊತ್ತದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕೊಪ್ಪ ನಿವಾಸಿ ಕೆ.ಎಸ್. ಗಣೇಶ್ ಬಂಧಿತ. ಬಂಧಿತನಿಂದ 84 ಗ್ರಾಂ ಮಾದಕ ಮತ್ತು ಸ್ಕೂಟರ್ ಅನ್ನು ವಶಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.