ADVERTISEMENT

ಮಂಗಳೂರು– ಮಡಿಕೇರಿ ರಸ್ತೆ ರಾತ್ರಿ ಸಂಚಾರ ನಿರ್ಬಂಧ ತೆರವು

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 14:39 IST
Last Updated 11 ಆಗಸ್ಟ್ 2022, 14:39 IST
   

ಮಡಿಕೇರಿ: ಮಂಗಳೂರು– ಮಡಿಕೇರಿ ರಸ್ತೆಯಲ್ಲಿ ಮದೆನಾಡು ಸಮೀಪ ಬಿರುಕು ಬಿಟ್ಟಿದ್ದ ಗುಡ್ಡದಿಂದಾಗಿ ರಾತ್ರಿ ಸಂಚಾರ ನಿಷೇಧಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ವಾಪಸ್ ಪಡೆದಿದ್ದಾರೆ.

ಸದ್ಯ, ಬಿರುಕು ಬಿಟ್ಟಿದ್ದ ಗುಡ್ಡದಿಂದ ಕುಸಿದಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ಶೇ 75ರಷ್ಟು ಪೂರ್ಣಗೊಂಡಿದೆ. ಉಳಿಕೆ ಮಣ್ಣಿನ ತೆರವು ಕಾರ್ಯವು ಬಿರುಸಿನಿಂದ ನಡೆಯುತ್ತಿದೆ. ಹಾಗಾಗಿ, ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT