ಸೋಮವಾರಪೇಟೆ: ಶನಿವಾರ ಬೆಳಿಗ್ಗೆಯಿಂದ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಮಧ್ಯಾಹ್ನ ಸಾಧಾರಣ ಮಳೆ ಸುರಿಯಿತು.
ಮುಂಗಾರು ಆರಂಭಗೊಂಡಿದ್ದು, ಈಗಾಗಲೇ ಕಾಫಿ ತೋಟಗಳಲ್ಲಿ ರಸಗೊಬ್ಬರ ಹಾಕಲಾಗಿದೆ. ಕಳೆದ ಕೆಲವು ದಿನಗಳಿಂದ ಸರಿಯಾಗಿ ಮಳೆಯಾಗದ ಪರಿಣಾಮ ಕೆಲವರು ಇನ್ನೂ ಮುಂದಾಗಿಲ್ಲ.
ಶನಿವಾರ ಮಧ್ಯಾಹ್ನ ಸಾಧಾರಣ ಮಳೆ ಸುರಿಯಿತು. ನಂತರ ಕೆಲವೊಮ್ಮೆ ತುಂತುರು ಮಳೆಯಾಗಿದ್ದರಿಂದ ಪಟ್ಟಣದಲ್ಲಿ ಸುಂದರವಾದ ಕಾಮನಬಿಲ್ಲು ಮೂಡಿ ಜನರನ್ನು ಆಕರ್ಷಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.