ADVERTISEMENT

ಮಡಿಕೇರಿ: ಮಲ್ಲಳ್ಳಿ ಜಲಪಾತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ

ಮೂಲಸೌಕರ್ಯದ ಕೊರತೆ ಕುರಿತು ವರದಿ ಪ್ರಕಟಿಸಿದ್ದ ‘ಪ್ರಜಾವಾಣಿ’

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 16:16 IST
Last Updated 21 ಜುಲೈ 2024, 16:16 IST
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭಾನುವಾರ ಮಲ್ಲಳ್ಳಿ ಜಲಪಾತ ವೀಕ್ಷಿಸಲು ತೆರಳಿದ ಕ್ಷಣ
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭಾನುವಾರ ಮಲ್ಲಳ್ಳಿ ಜಲಪಾತ ವೀಕ್ಷಿಸಲು ತೆರಳಿದ ಕ್ಷಣ   

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭಾನುವಾರ ಮಳೆ ಹಾನಿ ವೀಕ್ಷಣೆ ವೇಳೆ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತಕ್ಕೂ ಭೇಟಿ ನೀಡಿದರು.

ಮಲ್ಲಹಳ್ಳಿ ಫಾಲ್ಸ್‌ಗೆ ಮೂಲಸೌಕರ್ಯ ಒದಗಿಸಬೇಕು ಹಾಗೂ ಮಳೆಯಿಂದ ಹಾನಿಯಾದ ಸೇತುವೆಯನ್ನು ಬೇಗನೆ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾನುವಾರವಷ್ಟೇ ‘ಪ್ರಜಾವಾಣಿ’ ‘ಜಲಪಾತ ದರ್ಶನ’ ಸರಣಿಯಲ್ಲಿ ‘ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಈ ಸ್ಥಳ ಇಂದಿಗೂ ಮೂಲಸೌಕರ್ಯದ ಕೊರತೆ ಎದುರಿಸುತ್ತಿದೆ’ ಎಂದು ವರದಿ ಮಾಡಿತ್ತು.

ADVERTISEMENT
ಜುಲೈ 20ರಂದು ‘ಪ್ರಜಾವಾಣಿ’ ಜಲಪಾತ ದರ್ಶನ ಸರಣಿಯಲ್ಲಿ ‘ಮನಸೂರೆಗೊಳ್ಳುತ್ತಿದೆ ಸೋಮವಾರಪೇಟೆ ಮಲ್ಲಳ್ಳಿ ಜಲಪಾತ’ ಶೀರ್ಷಿಕೆಯಡಿ ಪ್ರಕಟಿಸಿದ್ದ ವಿಶೇಷ ವರದಿಯಲ್ಲಿ ‘ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಈ ಸ್ಥಳ ಇಂದಿಗೂ ಮೂಲಸೌಕರ್ಯದ ಕೊರತೆ ಎದುರಿಸುತ್ತಿದೆ’  ಎಂದು ವರದಿ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.