ADVERTISEMENT

ಭಾಗಮಂಡಲ: ತ್ರಿವೇಣಿ ಸಂಗಮದಲ್ಲಿ ಯುವಕ ನೀರುಪಾಲು

​ಪ್ರಜಾವಾಣಿ ವಾರ್ತೆ
Published 23 ಜೂನ್ 2020, 6:01 IST
Last Updated 23 ಜೂನ್ 2020, 6:01 IST
   

ನಾಪೋಕ್ಲು (ಕೊಡಗು): ವಾರ್ಷಿಕ ಪೂಜೆಗೆ ಕುಟುಂಬದೊಂದಿಗೆ ಆಗಮಿಸಿದ್ದ ಯುವಕನೊಬ್ಬ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರುಪಾಲದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೈಸೂರು ಜಿಲ್ಲೆ, ಹುಣಸೂರಿನ ಸುಬ್ರಮಣಿ (25) ಮೃತಪಟ್ಟವರು.

ಕುಟುಂಬಸ್ಥರು ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದರು. ನೀರಿನ ಹರಿವು ಜೋರಾಗಿದ್ದು ಮಣಿಕಂಠ ಎಂಬುವವರು ನೀರಿನಲ್ಲಿ ಮುಳುಗುತ್ತಿದ್ದರು. ಅವರನ್ನು ರಕ್ಷಣೆ ಮಾಡಿದ ಸುಬ್ರಮಣಿಗೆ ಮೇಲೆ ಬರಲು ಸಾಧ್ಯವಾಗದೇ ಸಾವನ್ನಪ್ಪಿದ್ದಾರೆ. ಇನ್ನು ಯಶೋದ ಹಾಗೂ ಪ್ರಮೀಳಾ ಅವರನ್ನ ಸ್ಥಳೀಯರು ರಕ್ಷಿಸಿದ್ದು ಅವರ ಸ್ಥಿತಿಯೂ ಗಂಭೀರವಾಗಿದೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾಗಮಂಡಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT