ADVERTISEMENT

ಎನ್‌ಸಿಸಿ ದಿನಾಚರಣೆ: ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2023, 6:35 IST
Last Updated 28 ನವೆಂಬರ್ 2023, 6:35 IST
ಮಡಿಕೇರಿಯ ರಾಜರ ಗದ್ದುಗೆಯ ಆಸುಪಾಸಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಭಾನುವಾರ ಸ್ವಚ್ಛತಾ ಕಾರ್ಯ ನಡೆಸಿದರು
ಮಡಿಕೇರಿಯ ರಾಜರ ಗದ್ದುಗೆಯ ಆಸುಪಾಸಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಭಾನುವಾರ ಸ್ವಚ್ಛತಾ ಕಾರ್ಯ ನಡೆಸಿದರು   

ಮಡಿಕೇರಿ: ಇಲ್ಲಿನ ರಾಜರ ಗದ್ದುಗೆಯ ಆಸುಪಾಸಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿಯ ವಿದ್ಯಾರ್ಥಿ ಕೆಡೆಟ್‌ಗಳು ಭಾನುವಾರ ಸ್ವಚ್ಛಗೊಳಿಸಿದರು.

ಎನ್‌ಸಿಸಿ ದಿನಾಚರಣೆ ಪ್ರಯುಕ್ತ ನಡೆದ ಈ ಕಾರ್ಯದಲ್ಲಿ ಸುಮಾರು 100ಕ್ಕೂ ಅಧಿಕ ವಿದ್ಯಾರ್ಥಿ ಕೆಡೆಟ್‌ಗಳು ಭಾಗಿಯಾದರು.

ಮಡಿಕೇರಿಯ ರಾಜರ ಗದ್ದುಗೆಯ ಆಸುಪಾಸಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಭಾನುವಾರ ಸ್ವಚ್ಛತಾ ಕಾರ್ಯ ನಡೆಸಿದರು

ಕೆಡೆಟ್‌ಗಳು ಗದ್ದುಗೆಯ ಆಸುಪಾಸಿನಲ್ಲಿದ್ದ ಪ್ಲಾಸ್ಟಿಕ್ ಮತ್ತು ತ್ಯಾಜ್ಯವನ್ನು ಸಂಗ್ರಹಿಸಿದರು. ಗದ್ದುಗೆಯ ಗೋಡೆಗಳನ್ನು ಸ್ವಚ್ಛಗೊಳಿಸಿದರು. ಕಾಲೇಜಿನ ಪ್ರಾಂಶುಪಾಲರು ಹಾಗೂ ಎನ್‌ಸಿಸಿ ಅಧಿಕಾರಿಗಳಾದ ಮೇಜರ್ ಪ್ರೊ ರಾಘವ ಬಿ ಮತ್ತು ಹವಾಲ್ದಾರ್ ಮೇಜರ್ ರಾಮ್ ಬಹದ್ದೂರ್ ಥಾಪಾ ಮತ್ತು ಉಪನ್ಯಾಸಕರಾದ ಪವನ್ ಕುಮಾರ್ ಮಾರ್ಗದರ್ಶನ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.