ಮಡಿಕೇರಿ: ಕೊಡಗು ಜಿಲ್ಲೆಯಲ್ಲಿಇದುವರೆಗೂ 34 ಗಂಟಲು ದ್ರವ ಹಾಗೂ ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 1 ಪ್ರಕರಣ ದೃಢಪಟ್ಟು 32 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ. 1 ಪ್ರಕರಣದಲ್ಲಿ ವರದಿ ನಿರೀಕ್ಷಿಸಲಾಗಿದೆ.
ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಇಟ್ಟು ಉಪಚರಿಸಲಾಗುತ್ತಿದ್ದ 3 ಪ್ರಕರಣಗಳ ಪೈಕಿ, 2 ಪ್ರಕರಣದಲ್ಲಿ ನೆಗೆಟಿವ್ ವೈದ್ಯಕೀಯ ವರದಿ ಬಂದ ಕಾರಣ ಅವರನ್ನು ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಸೋಂಕು ದೃಢಪಟ್ಟ 1 ಪ್ರಕರಣದ ವ್ಯಕ್ತಿಯನ್ನು ಮಾತ್ರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಇಟ್ಟು ಉಪಚರಿಸಲಾಗುತ್ತಿದೆ.
ಎಲ್ಲಾ ಬ್ಯಾಂಕುಗಳ ಎಟಿಎಂಗಳಲ್ಲಿ ಸ್ಯಾನಿಟೈಜರ್ ಇಡಲು ಹಾಗೂ ಎಟಿಎಂಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಎಲ್ಲಾ ಸೂಕ್ತ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.