ADVERTISEMENT

ಹಣ, ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕ

ಸುಜಯ್‌ಗೆ ಅಭಿನಂದನೆಗಳ ಮಹಾಪೂರ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 19:30 IST
Last Updated 5 ಸೆಪ್ಟೆಂಬರ್ 2019, 19:30 IST
ಸುಜಯ್‌
ಸುಜಯ್‌   

ಮಡಿಕೇರಿ: ರಸ್ತೆಯಲ್ಲಿ ಸಿಕ್ಕಿದ ಚಿನ್ನಾಭರಣ ಹಾಗೂ ನಗದನ್ನು ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಮರಗೋಡು ಗ್ರಾಮದ ಯುವಕ ಬಡುವಂಡ್ರ ಸುಜಯ್ ಪ್ರಾಮಾಣಿಕತೆ ಮೆರೆದಿದ್ದಾರೆ.

ಹೊಸ್ಕೇರಿ ಸಮೀಪ ತೆರಳುತ್ತಿರುವಾಗ ರಸ್ತೆಯಲ್ಲಿ ಬ್ಯಾಗ್ ಸಿಕ್ಕಿದೆ. ಅದನ್ನು ಪರಿಶೀಲಿಸಿದಾಗ ಅದರಲ್ಲಿರಸ್ತೆಯಲ್ಲಿ ₹ 1.5 ಲಕ್ಷ ಮೌಲ್ಯದ ಚಿನ್ನಾಭರಣ, ₹ 17 ಸಾವಿರ ನಗದು ಇತ್ತು. ಬ್ಯಾಗ್‌ನಲ್ಲಿ ದೊರೆತ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ನಾಪೋಕ್ಲು ಗ್ರಾಮದ ಮಣಿಕಂಠ ಅವರು ಭಾರೀ ಮಳೆಗೆ ಹೆದರಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಮತ್ತು ದಾಖಲಾತಿ ತೆಗೆದುಕೊಂಡು ಸಂಬಂಧಿಕರ ಮನೆಗೆ ಹೊರಟಿದ್ದಾರೆ. ಆದರೆ, ಮಾರ್ಗಮಧ್ಯೆ ಅವರ ಈ ಬ್ಯಾಗ್ ಬಿದ್ದುಹೋಗಿತ್ತು. ಆ ಬ್ಯಾಗ್‌ ಸುಜಯ್‌ಗೆ ಸಿಕ್ಕಿತ್ತು. ಅದನ್ನು ಅವರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ.

ADVERTISEMENT

ಮರಗೋಡು ವೈಷ್ಣವಿ ಫುಟ್‌ಬಾಲ್‌ ತಂಡದ ನಾಯಕ ಸುಜಯ್. ಪ್ರಾಮಾಣಿಕತೆ ಮೆರೆದ ಈ ಯುವಕನಿಗೆ ಊರಿನವರು ಅಭಿನಂದಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.