ADVERTISEMENT

ಮೂರ್ನಾಡು ಬಳಿಯ ಐಕೊಳ ಗ್ರಾಮದಲ್ಲಿ ಹುಲ್ಲಿನ ಮೆದೆ ಭಸ್ಮ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2019, 12:59 IST
Last Updated 12 ಮಾರ್ಚ್ 2019, 12:59 IST
ನಾಪೋಕ್ಲು ಸಮೀಪದ ಮೂರ್ನಾಡಿನ ಐಕೊಳ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ಹುಲ್ಲಿನ ಮೆದೆ ಭಸ್ಮವಾಗಿದೆ
ನಾಪೋಕ್ಲು ಸಮೀಪದ ಮೂರ್ನಾಡಿನ ಐಕೊಳ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ಹುಲ್ಲಿನ ಮೆದೆ ಭಸ್ಮವಾಗಿದೆ   

ನಾಪೋಕ್ಲು: ಸಮೀಪದ ಮೂರ್ನಾಡು ಬಳಿಯ ಐಕೊಳ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶವಾಗಿ ಹುಲ್ಲಿನ ಮೆದೆ ಸಂಪೂರ್ಣ ಭಸ್ಮವಾಗಿದೆ.

ಐಕೊಳ ಗ್ರಾಮದ ನಿವಾಸಿ ಮುಕ್ಕಾಟಿರ ಬೋಪಯ್ಯ (ಕಿರಣ್) ಅವರ ಕಣದಲ್ಲಿ ಶೇಖರಿಸಲಾದ ಹುಲ್ಲಿನ ಮೆದೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಬೂದಿಯಾಗಿದೆ. ಕಣದ ಪಕ್ಕದಲ್ಲಿ ಹಾದು ಹೋದ ವಿದ್ಯುತ್ ತಂತಿಗೆ ತೆಂಗಿನ ಮರದ ರೆಂಬೆ ಬಿದ್ದ ಪರಿಣಾಮವಾಗಿ ವಿದ್ಯುತ್ ಸ್ವರ್ಶವಾಗಿ ಬೆಂಕಿ ತಗುಲಿದೆ ಎನ್ನಲಾಗಿದೆ.

ಆಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.