ಸುಂಟಿಕೊಪ್ಪ: ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಮೊದಲ ಮಳೆ ಸುರಿದು ರೈತರಲ್ಲಿದ್ದ ಆತಂಕ ದೂರ ಮಾಡಿತು. ಕಳೆದ ಹಲವು ದಿನಗಳಿಂದ ಬಿರುಬಿಸಿಲು ಮತ್ತು ಸೆಕೆಯಿಂದ ತತ್ತರಿಸಿ ಹೋಗಿದ್ದ ಜನರು ಮಂಗಳವಾರ ಸುರಿದ ಮಳೆಗೆ ನಿಟ್ಟುಸಿರು ಬಿಟ್ಟರು.
ಮಂಗಳವಾರ ಬೆಳಿಗ್ಗೆಯಿಂದ ಉರಿ ಬಿಸಿಲಿನಿಂದ ಕೂಡಿದ್ದ ಪಟ್ಟಣದಲ್ಲಿ ಸಂಜೆ ವೇಳೆ ಗುಡುಗು–ಸಿಡಿಲಿನಿಂದ ಕೂಡಿದ ಮಳೆ ಸುರಿಯಿತು. ಹರದೂರು, ನಾಕೂರು ಶಿರಂಗಾಲ, ಮಾದಾಪುರ, ಕೆದಕಲ್, ಕೊಡಗರಹಳ್ಳಿ, ಏಳನೇ ಹೊಸಕೋಟೆ, ಕಂಬಿಬಾಣೆಯಲ್ಲೂ ಉತ್ತಮ ಮಳೆ ಸುರಿಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.