ADVERTISEMENT

ಇಂದು ಸಂತ್ರಸ್ತರಿಗೆ ಸಹಾಯಧನ ವಿತರಣೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 13:13 IST
Last Updated 16 ಜನವರಿ 2019, 13:13 IST

ಮಡಿಕೇರಿ: ಬೆಂಗಳೂರಿನ ‘ಜಮಾತ್‌ಉಲಮಾ-ಎ- ಕರ್ನಾಟಕ’ ಸಂಘಟನೆ ವತಿಯಿಂದ ಜ.17ರಂದು ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ರಾಷ್ಟ್ರೀಯ ಏಕತಾ ಸಮಾವೇಶ ಹಾಗೂ ಸಂತ್ರಸ್ತರಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟನೆಯ ಪ್ರಮುಖರಾದ ಮನ್ಸೂರು ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಕೃತಿ ವಿಕೋಪದಿಂದ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ, ಅಲ್ಪಹಾನಿಗೊಳಗಾದ ಸಂತ್ರಸ್ತರನ್ನು ಈಗಾಗಲೇ ಗುರುತಿಸಲಾಗಿದೆ. 300ಕ್ಕೂ ಹೆಚ್ಚು ಸಂತ್ರಸ್ತರಿಗೆ ₹ 50 ಲಕ್ಷ ಹಣವನ್ನು ಅಂದಿನ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.

ಅಂದು ಬೆಳಿಗ್ಗೆ 11ಕ್ಕೆ ಜಮಾತ್‌ನ ಪ್ರಧಾನ ಕಾರ್ಯದರ್ಶಿ ಮೌಲಾನ ಮಹಮದ್ ಆಸದ್ ಮದನಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಂ.ಐ. ಅಕ್ಬರ್ ಪಾಷ, ಹಫೀಜ್ ರಿಯಾಜ್ ಅಹ್ಮದ್, ಮೌಲಾನ ಅಬ್ದುಲ್ ಹಕೀಂ, ಹಾಫಿಜ್ ಇಸಾಕ್ ಅಹ್ಮದ್, ನಸರುಲ್ಲಾ ಷರೀಫ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.