ADVERTISEMENT

ಮಡಿಕೇರಿ: ಬೈಕ್‌ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2019, 13:00 IST
Last Updated 12 ಮಾರ್ಚ್ 2019, 13:00 IST
ಸುಟ್ಟು ಹೋಗಿರುವ ಬೈಕ್‌
ಸುಟ್ಟು ಹೋಗಿರುವ ಬೈಕ್‌   

ಮಡಿಕೇರಿ: ನಗರದ ಜಿಲ್ಲಾ ಆಸ್ಪತ್ರೆಯ ‘ಡಿ’ ಗ್ರೂಪ್‌ ವಸತಿ ಗೃಹದ ಎದುರು ನಿಲ್ಲಿಸಿದ್ದ ಬೈಕ್‌ಗೆ ಸೋಮವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಉಡೋತ್‌ ಮೊಟ್ಟೆ ನಿವಾಸಿ ಬಿ.ಎಸ್. ವೆಂಕಟೇಶ್ ಅವರಿಗೆ ಸೇರಿದ ರಾಯಲ್‌ ಎನ್‌ಫೀಲ್ಡ್‌ ಬೈಕ್ ಬೆಂಕಿಗೆ ಆಹುತಿಯಾಗಿದ್ದು ಭಾಗಶಃ ಸುಟ್ಟು ಕರಕಲಾಗಿದೆ.

ವೆಂಕಟೇಶ್ ಜಿಲ್ಲಾ ಆಸ್ಪತ್ರೆಯ ಸರ್ಕಾರಿ ಆಂಬುಲೆನ್ಸ್‌ ವಾಹನದ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸೋಮವಾರ ಕೆಲಸದ ಮೇಲೆ ಮೈಸೂರಿಗೆ ಹೋಗಿದ್ದರು. ರಾತ್ರಿ ಬಂದು ನೋಡುವಾಗ ಬೆಂಕಿ ಹಾಕಿರುವುದು ಗೊತ್ತಾಗಿದೆ. ಕೃತ್ಯಕ್ಕೆ ಕಾರಣ ತಿಳಿದಿಲ್ಲ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.