ADVERTISEMENT

ಕೇಂದ್ರ ಗುಪ್ತಚರ ಇಲಾಖೆಯ ಸೂಚನೆ: ಮಡಿಕೇರಿಯಲ್ಲೂ ಪೊಲೀಸರ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2019, 14:03 IST
Last Updated 29 ಏಪ್ರಿಲ್ 2019, 14:03 IST
ಮಡಿಕೇರಿ ರಾಜಾಸೀಟ್‌ನಲ್ಲಿ ಸೋಮವಾರ ವಿಧ್ವಂಸಕ ಪತ್ತೆ ದಳದ ಸಿಬ್ಬಂದಿ ತಪಾಸಣೆ ನಡೆಸಿದರು
ಮಡಿಕೇರಿ ರಾಜಾಸೀಟ್‌ನಲ್ಲಿ ಸೋಮವಾರ ವಿಧ್ವಂಸಕ ಪತ್ತೆ ದಳದ ಸಿಬ್ಬಂದಿ ತಪಾಸಣೆ ನಡೆಸಿದರು   

ಮಡಿಕೇರಿ: ಕೇಂದ್ರ ಗುಪ್ತಚರ ಇಲಾಖೆಯ ಸೂಚನೆಯ ಮೇರೆಗೆ ಕೊಡಗು ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಸೋಮವಾರ ಮುನ್ನೆಚ್ಚರಿಕಾ ಕ್ರಮವಾಗಿ ರಾಜಾಸೀಟ್‌ ಸೇರಿದಂತೆ ವಿವಿಧೆಡೆ ವಿಧ್ವಂಸಕ ಪತ್ತೆದಳ ಸಿಬ್ಬಂದಿ ತಪಾಸಣೆ ನಡೆಸಿದರು.

ಬಸ್ ನಿಲ್ದಾಣ, ಆಕಾಶವಾಣಿ ಕೇಂದ್ರ, ನ್ಯಾಯಾಲಯ, ಜಿಲ್ಲಾಡಳಿತ ಸಂಕೀರ್ಣದಲ್ಲೂ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಕಣ್ಗಾವಲು ಮುಂದುವರಿದಿದೆ.

ADVERTISEMENT

ಶ್ವಾನದಳ ಸೇರಿದಂತೆ ವಿಧ್ವಂಸಕ ಕೃತ್ಯ ತಪಾಸಣಾ ತಂಡ ನಗರದಲ್ಲಿಯೂ ಕಾರ್ಯನ್ಮುಖವಾಗಿದೆ. ಭಾನುವಾರ ಹಾರಂಗಿ ಜಲಾಶಯ, ಕುಶಾಲನಗರ ಬಸ್ ನಿಲ್ದಾಣ, ನ್ಯಾಯಾಲಯ ಆವರಣ, ಸೋಮವಾರಪೇಟೆಯ ಬಸ್ ನಿಲ್ದಾಣ, ನ್ಯಾಯಾಲಯ, ಸರ್ಕಾರಿ ಕಚೇರಿಗಳ ಆವರಣದಲ್ಲಿ ಈ ತಂಡವು ಪರಿಶೀಲನೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.