ADVERTISEMENT

ಕಾರ್ಮಿಕರಿಗಾಗಿ ವಿವಿಧ ಸ್ಪರ್ಧೆ

ಕಾರ್ಮಿಕರ ದಿನದ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 1 ಮೇ 2019, 14:43 IST
Last Updated 1 ಮೇ 2019, 14:43 IST
ಮಹಿಳೆಯರು ಮೂರು ಕಾಲಿನ ಓಟ ಸ್ಪರ್ಧೆಯಲ್ಲಿ ಪಾಲ್ಗೊಂಡರು
ಮಹಿಳೆಯರು ಮೂರು ಕಾಲಿನ ಓಟ ಸ್ಪರ್ಧೆಯಲ್ಲಿ ಪಾಲ್ಗೊಂಡರು   

ಪೊನ್ನಂಪೇಟೆ: ಸಂಸ್ಥೆಯು ಕಾರ್ಮಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಪ್ರತಿ ವರ್ಷ ಕಾರ್ಮಿಕರ ದಿನಾಚರಣೆ ಅಂಗವಾಗಿ ತಪ್ಪದೆ ಕ್ರೀಡಾಕೂಟ ಆಯೋಜಿಸಿಕೊಂಡು ಬರುತ್ತಿದೆ ಎಂದು ಟಾಟಾ ಕಾಫಿ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಕೆ.ಜಿ ರಾಜೀವ್ ಅಭಿಪ್ರಾಯಪಟ್ಟರು.

ಪಾಲಿಬೆಟ್ಟದ ಟಾಟಾ ಕಾಫಿ ಮೈದಾನದಲ್ಲಿ ಕಾರ್ಮಿಕರ ದಿನದ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ತೋಟಗಳಲ್ಲಿ ವನ್ಯಮೃಗಗಳ ಹಾವಳಿ ಹೆಚ್ಚಾಗಿರುವ ಕಾರಣ ಕಾರ್ಮಿಕರು ಎಚ್ಚರದಿಂದ ಕೆಲಸ ಮಾಡಬೇಕಿದೆ. ವರ್ಷವಿಡೀ ದುಡಿಯುವ ಕಾರ್ಮಿಕ ವರ್ಗಕ್ಕೆ ಮನರಂಜನೆ ನೀಡುವ ಉದ್ದೇಶದಿಂದ ಕ್ರೀಡೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಕ್ರೀಡಾಜ್ಯೋತಿಯನ್ನು ಬೆಳಗುವ ಮೂಲಕ ಹಿರಿಯ ಪ್ರಧಾನ ವ್ಯವಸ್ಥಾಪಕ ಎಂ.ಬಿ ಗಣಪತಿ ಕಾರ್ಮಿಕರ ದಿನಾಚರಣೆಗೆ ಚಾಲನೆ ನೀಡಿದರು. ವಿವಿಧ ಭಾಗಗಳಿಂದ ಬಂದಿದ್ದ ಕಾರ್ಮಿಕರು ‌ಪಥಸಂಚಲನ ನಡೆಸಿದರು.

ಕ್ರೀಡಾಕೂಟದಲ್ಲಿ ಗೋಣಿಚೀಲ ಓಟ, ಮಡಕೆ ಹೊತ್ತು ಓಟ, ಮೂರು ಕಾಲಿನ ಓಟ, ಹಗ್ಗಜಗ್ಗಾಟ ಗಮನಸೆಳೆದವು.

ಕ್ರೀಡಾ ಸಂಚಾಲಕ ಕಿರಣ್ ಮಾಧವನ್ ಹಾಗೂ ಕ್ರೀಡಾ ಸಲಹೆಗಾರ ಸಿ.ಯು ಅಶೋಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.