ADVERTISEMENT

ಗೋಣಿಕೊಪ್ಪಲು: ಮುಂದುವರಿದ ತೋಡು ತೆರವು ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2021, 12:48 IST
Last Updated 5 ಡಿಸೆಂಬರ್ 2021, 12:48 IST
ಗೋಣಿಕೊಪ್ಪಲು ಬೈಪಾಸ್ ರಸ್ತೆ ತೋಡಿನ ಒತ್ತುವರಿ ತೆರವು ಕಾರ್ಯಾಚರಣೆ ಭಾನುವಾರವೂ ನಡೆಯಿತು
ಗೋಣಿಕೊಪ್ಪಲು ಬೈಪಾಸ್ ರಸ್ತೆ ತೋಡಿನ ಒತ್ತುವರಿ ತೆರವು ಕಾರ್ಯಾಚರಣೆ ಭಾನುವಾರವೂ ನಡೆಯಿತು   

ಗೋಣಿಕೊಪ್ಪಲು: ಪಟ್ಟಣದ ಕೀರೆಹೊಳೆ ಮತ್ತು ಬೈಪಾಸ್ ರಸ್ತೆ ತೆರವು ಕಾರ್ಯ ಭಾನುವಾರವೂ ನಡೆಯಿತು. ಸರ್ವೆ ಅಧಿಕಾರಿ ಶಿವಾನಂದ ರೆಡ್ಡಿ ಸ್ಥಳದಲ್ಲಿ ಹಾಜರಿದ್ದು, ಬೈಪಾಸ್ ರಸ್ತೆ ತೋಡಿನ ತೆರವು ಕಾರ್ಯಾಚರಣೆಯನ್ನು ಜೆಸಿಬಿ ಮೂಲಕ ನಡೆಸಿದರು.

ಪೂಜಾರಿ ಆರ್ಕೆಡ್ ಹಿಂಭಾಗದಲ್ಲಿ ನಡೆಯುತ್ತಿದ್ದ ಕೆಲಸವನ್ನು ಅಲ್ಲಿನ ಮನೆಯೊಂದರ ಮಾಲೀಕರು ತಡೆ ಒಡ್ಡಿದರು. ತೋಡಿಗೆ ಸೇರಿದಂತೆ ಮನೆಯ ಕಾಪೌಂಡ್ ನಿರ್ಮಿಸಲಾಗಿತ್ತು. ಇದನ್ನು ತೆರವುಗೊಳಿಸಲು ಮುಂದಾದ ಸಂದರ್ಭದಲ್ಲಿ ಮನೆ ಮಾಲೀಕರೊಬ್ಬರು ಸರ್ವೆ ಇಲಾಖೆ ಅಧಿಕಾರಿಗೊಳೊಂದಿಗೆ ಮಾತಿನ ಚಕಮಕಿ ನಡೆಸಿದರು. ದಾಖಲೆ ಪರಿಶೀಲಿಸಿದ ಬಳಿಕ ಕಾರ್ಯಾಚರಣೆ ಮುಂದುವರಿಸಿ ಎಂದು ಹೇಳಿ ಕೆಲಸಕ್ಕೆ ಅಡ್ಡಿಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸರ್ವೆ ಅಧಿಕಾರಿ ಶಿವಾನಂದ ರೆಡ್ಡಿ ನಕ್ಷೆಯಲ್ಲಿ ಇದ್ದಂತೆಯೇ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿ ಕೆಲಸವನ್ನು ಮುಂದುವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.