ADVERTISEMENT

ಅತಿವೃಷ್ಟಿ: ಕೊಡಗಿನಲ್ಲಿ ಬಂದ್ ಇಲ್ಲ, ಸಾಂಕೇತಿಕ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2018, 1:29 IST
Last Updated 10 ಸೆಪ್ಟೆಂಬರ್ 2018, 1:29 IST
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯು ಅತಿವೃಷ್ಟಿಗೆ ತುತ್ತಾಗಿರುವ ಪರಿಣಾಮ ವಿರೋಧ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಬಂದ್ ನಿರ್ಧಾರ ಕೈಬಿಟ್ಟಿದ್ದು, ಸಾಂಕೇತಿಕ ಪ್ರತಿಭಟನೆ ನಡೆಸಲಿವೆ.

ಬೆಳಿಗ್ಗೆ 10.30ಕ್ಕೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. 11.30ಕ್ಕೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಶಾಲಾ- ಕಾಲೇಜುಗಳು ಎಂದಿನಂತೆಯೇ ನಡೆಯಲಿವೆ. ವಾಹನ ಸಂಚಾರ ಎಂದಿನಂತೆಯೇ ಇದೆ.

ADVERTISEMENT


ಮಂಗಳೂರಲ್ಲಿ ಬಂದ್ ಲಕ್ಷಣ
ಮಂಗಳೂರಿನಲ್ಲಿ ಬೆಳಗ್ಗೆಯೇ ಬಂದ್ ಲಕ್ಷಣಗಳು ಕಾಣಿಸಿಕೊಂಡಿದೆ, ಬೆಳಗ್ಗೆ 6.20ರ ಹೊತ್ತಿಗೆ ಪಂಪ್ ವೆಲ್ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಲಾಗಿದೆ. ಆಟೊಗಳ ಸಂಖ್ಯೆ ವಿರಳವಾಗಿದೆ. ಬಸ್‍ಗಳ ಓಡಾಟ ಆರಂಭವಾಗಿಲ್ಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.