ADVERTISEMENT

ನಾಪೋಕ್ಲು: ಕುಡಿದ ಮತ್ತಿನಲ್ಲಿ ತಂದೆ- ತಾಯಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 13:06 IST
Last Updated 4 ಆಗಸ್ಟ್ 2020, 13:06 IST
ಆರೋಪಿ ಅಯ್ಯಪ್ಪ
ಆರೋಪಿ ಅಯ್ಯಪ್ಪ   

ನಾಪೋಕ್ಲು: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆತ್ತ ತಂದೆ– ತಾಯಿಯನ್ನು ದೊಣ್ಣೆಯಿಂದ ಥಳಿಸಿ ಹತ್ಯೆ ಮಾಡಿದ ಧಾರುಣ ಘಟನೆ ಇಲ್ಲಿಗೆ ಸಮೀಪದ ಕೋಕೇರಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಕೇರಿ ಗ್ರಾಮದ ಕಾಫಿ ಬೆಳೆಗಾರ ಚೇನಂಡ ಶಿವಾಜಿ ಸೋಮಯ್ಯನವರ ಲೈನ್ ಮನೆಯ ನಿವಾಸಿ ಅಯ್ಯಪ್ಪ (26) ಎಂಬಾತ ಕುಡಿದ ಅಮಲಿನಲ್ಲಿ ತನ್ನ ತಂದೆ– ತಾಯಿಯನ್ನು ದೊಣ್ಣೆಯಿಂದ ಥಳಿಸಿದ್ದಾನೆ. ವಾಸವಾಗಿದ್ದ ಎರವರ ರಾಜು (65) ಮತ್ತು ಗೌರಿ (60) ಸ್ಥಳದಲ್ಲೇ ಮೃಥಪಟ್ಟಿದ್ದಾರೆ.

ತೋಟದ ಮಾಲೀಕ ಮಂಗಳವಾರ ಬೆಳಿಗ್ಗೆ ಕೆಲಸಕ್ಕೆ ಕಾರ್ಮಿಕರನ್ನು ಕರೆಯಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಅವರು ನಾಪೋಕ್ಲು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಾಪೋಕ್ಲು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಮಡಿಕೇರಿ ಡಿವೈಎಸ್‌ಪಿ ದಿನೇಶ್ ಕುಮಾರ್, ಗ್ರಾಮಾಂತರ ಠಾಣಾ ಸಿಪಿಐ ದಿವಾಕರ್, ಪಿಎಸ್‌ಐ ಆರ್.ಕಿರಣ್, ಸಿಬ್ಬಂದಿ ಭೇಟಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.