ಮಡಿಕೇರಿ: ಪೊಲೀಸ್ ಇಲಾಖೆ ಸಿದ್ದರಾಮಯ್ಯ ಅವರ ಕಪಿಮುಷ್ಠಿಯಲ್ಲಿದೆ ಎಂದು ಬಿಜೆಪಿ ಮುಖಂಡ ಪ್ರತಾಪಸಿಂಹ ಆರೋಪಿಸಿದರು.
ಕಾಂಗ್ರೆಸ್ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಹೆಸರನ್ನು ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಸೇರಿಸಲು ಆಗದು ಎಂದು ಸಿದ್ದರಾಮಯ್ಯ ಹೇಳಿರುವುದೇ ಇದಕ್ಕೆ ಸಾಕ್ಷಿ ಎಂದು ತಿಳಿಸಿದರು.
ಇನ್ನು ಮುಂದೆ ಶಾಸಕರಾದ ಪೊನ್ನಣ್ಣ ಹಾಗೂ ಮಂತರ್ ಗೌಡ ಅವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.