ADVERTISEMENT

ಮಡಿಕೇರಿಯ ಸೂಕ್ಷ್ಮ ಪ್ರದೇಶದಲ್ಲಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2019, 13:50 IST
Last Updated 6 ಡಿಸೆಂಬರ್ 2019, 13:50 IST
ಮಡಿಕೇರಿಯ ಚೌಕಿಯಲ್ಲಿ ಶುಕ್ರವಾರ ಕಂಡುಬಂದ ಪೊಲೀಸರು
ಮಡಿಕೇರಿಯ ಚೌಕಿಯಲ್ಲಿ ಶುಕ್ರವಾರ ಕಂಡುಬಂದ ಪೊಲೀಸರು   

ಮಡಿಕೇರಿ: ಬಾಬರಿ ಮಸೀದಿ ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕೋಮಿನವರು ಕರಾಳ ದಿನಾಚರಣೆ ಹಾಗೂ ವಿಜಯೋತ್ಸವ ಆಚರಣೆ ಮಾಡಬಹುದೆಂಬ ಕಾರಣಕ್ಕೆ ನಗರವೂ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶದಲ್ಲಿ ಶುಕ್ರವಾರ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿತ್ತು.

ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪೊಲೀಸರು ವ್ಯಾಪಕ ಕ್ರಮ ಕೈಗೊಂಡಿದ್ದರು. ಮಡಿಕೇರಿಯಲ್ಲಿ ನಿಷೇಧಾಜ್ಞೆಯನ್ನೂ ಜಾರಿಗೊಳಿಸಲಾಗಿತ್ತು. ನಗರದ ಪೇಟೆ ಶ್ರೀರಾಮಮಂದಿರ, ಚೌಕಿ ಹಾಗೂ ಜನರಲ್‌ ತಿಮ್ಮಯ್ಯ ವೃತ್ತ ಹಾಗೂ ಮಹದೇವಪೇಟೆಯಲ್ಲಿ ಹೆಚ್ಚಿನ ಪೊಲೀಸರು ಕಂಡುಬಂದರು. ಎಲ್ಲಿಯೂ ಅಹಿತಕರ ಘಟನೆ ನಡೆದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT