ಕುಶಾಲನಗರ: ಪಟ್ಟಣದ ರಥಬೀದಿಯ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಎರಡನೇ ದಿನವಾದ ಸೋಮವಾರ ರಾತ್ರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಬ್ರಹ್ಮಚಾರಣಿ ಪೂಜೆ ನೆರವೇರಿಸಲಾಯಿತು.
ದೇವಿಯ ವಿಗ್ರಹಕ್ಕೆ ವಿವಿಧ ಪುಷ್ಪ, ಹಣ್ಣುಗಳಿಂದ ಅಲಂಕಾರ ಮಾಡಿ ಶೃಂಗರಿಸಿದ್ದರು. ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್.ಉದಯ್ ಕುಮಾರ್, ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ವಾಸವಿ ಯುವಜನ ಸಂಘದ ಅಧ್ಯಕ್ಷ ಕೆ.ಪ್ರವೀಣ್, ಯುವತಿಯರ ಸಂಘದ ಅಧ್ಯಕ್ಷೆ ಕವಿತಾ ಪ್ರವೀಣ್, ಆರ್ಯವೈಶ್ಯ ಮಂಡಳಿ ಪದಾಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.