ADVERTISEMENT

ಕುಶಾಲನಗರ: ಕಡಿಮೆ ಅಂಕ; ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 10:40 IST
Last Updated 18 ಜೂನ್ 2022, 10:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕುಶಾಲನಗರ (ಕೊಡಗು ಜಿಲ್ಲೆ): ಕಡಿಮೆ ಅಂಕ ಬಂದಿದ್ದರಿಂದ ಬೇಸರಗೊಂಡ ಪಿಯು ವಿದ್ಯಾರ್ಥಿನಿ ಸಂಧ್ಯಾ (17) ನೇಣು ಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ತಾಲ್ಲೂಕಿನ ಬಸವನಹಳ್ಳಿ ನಿವಾಸಿಯಾದ ಇವರು ತಂದೆ, ತಾಯಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ನೇಣು ಹಾಕಿಕೊಂಡಿದ್ದಾರೆ. ಪಿಯು ಪರೀಕ್ಷೆಯಲ್ಲಿ ಪಾಸಾಗಿದ್ದರೂ ಕಡಿಮೆ ಅಂಕ ಬಂದಿತು ಎಂದು ಬೇಸರಗೊಂಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ

ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.