ವಿರಾಜಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಯು ಬುಧವಾರ ಕೊಂಚ ಇಳಿಮುಖವಾಗಿದೆ.
ಗದ್ದೆ ಹಾಗೂ ಕಿರುಹೊಳೆಗಳಲ್ಲಿ ಪ್ರವಾಹ ಇಳಿದಿತ್ತು. ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿಯ ಚರ್ಚ್ ರಸ್ತೆಗೆ ಗಾಳಿಮಳೆಗೆ ಅಡ್ಡಲಾಗಿ ಮರವೊಂದು ಬಿದ್ದು ಕೆಲಕಾಲ ಸಂಚಾರಕ್ಕೆ ಅಡಚಣೆಯಾಗಿತ್ತು, ಬಳಿಕ ಅದನ್ನು ತೆರವುಗೊಳಿಸಲಾಯಿತು. ಮರ ಬಿದ್ದು ಸಮೀಪದಲ್ಲಿನ ಕೆಲ ವಿದ್ಯುತ್ ಕಂಬಗಳಿಗೂ ಹಾನಿಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.