ಮಡಿಕೇರಿ: ಕೊಡಗು ಜಿಲ್ಲೆಯ ಅಲ್ಲಲ್ಲಿ ಗುರುವಾರವೂ ಬಿರುಸಿನಿಂದ ಮಳೆ ಸುರಿದಿದೆ. ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಗೋಣಿಕೊಪ್ಪಲು ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.
ಗುಡುಗು ಸಿಡಿಲು, ಬಿರುಗಾಳಿಯೊಂದಿಗೆ ಸುರಿದ ಮಳೆಯು ಬಿಸಿಲ ಬೇಗೆಯನ್ನು ಕಡಿಮೆ ಮಾಡಿತು. ಏಳನೇ ಹೊಸಕೋಟೆ, ಕೆದಕಲ್, ಗದ್ದೆಹಳ್ಳ ಭಾಗದಲ್ಲಿ ಹೆಚ್ಚು ಮಳೆ ಸುರಿದಿದೆ.
ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಹಲವೆಡೆ ಹಾನಿ ಸಂಭವಿಸಿದೆ. ಪಟ್ಟಣದಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಗ್ರಾಮೀಣ ಪ್ರದೇಶದಲ್ಲಿ ಗಾಳಿಗೆ ಮರದ ರೆಂಬೆಗಳು ಮುರಿದುಬಿದ್ದಿವೆ. ಕೆಲವು ಭಾಗಗಳಲ್ಲಿ ವಿದ್ಯುತ್ ಕಂಬಗಳು ತುಂಡಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.