ADVERTISEMENT

ಹಣ, ತೋಳ್ಬಲದಿಂದ ಈಶಾನ್ಯ ಭಾರತದಲ್ಲಿ ಬಿಜೆಪಿಗೆ ಗೆಲುವು: ರಣದೀಪ್‌ ಸುರ್ಜೇವಾಲ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2023, 13:45 IST
Last Updated 2 ಮಾರ್ಚ್ 2023, 13:45 IST
ರಣದೀಪ್‌ ಸಿಂಗ್‌ ಸುರ್ಜೇವಾಲ
ರಣದೀಪ್‌ ಸಿಂಗ್‌ ಸುರ್ಜೇವಾಲ   

ಮಡಿಕೇರಿ: ‘ಹಣ ಹಾಗೂ ತೋಳ್ಬಲಗಳಿಂದ ಈಶಾನ್ಯ ಭಾರತದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ತಿಳಿಸಿದರು.

‘ಪಶ್ಚಿಮ ಬಂಗಾಲ ಮತ್ತು ಮಹಾರಾಷ್ಟ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ದೇಶದಲ್ಲಿ ಕಾಂಗ್ರೆಸ್‌ ಪರ ಅಲೆ ಸೃಷ್ಟಿಯಾಗಿದೆ ಎಂಬುದಕ್ಕೆ ದ್ಯೋತಕ. ಜತೆಗೆ, ಮಧ್ಯ ಹಾಗೂ ಉತ್ತರ ಭಾರತದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಕಡೆ ನಡೆದಿರುವ ಉಪಚುನಾವಣೆಗಳಲ್ಲಿ ಅದು ಸೋತಿರುವುದು ಆ ಪಕ್ಷದ ಜನಪ್ರಿಯತೆ ಕುಗ್ಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆ ‘ಮೋದಿ ರಾಜ್ಯ’ವನ್ನು ಕೊನೆಗೊಳಿಸುವ ಮೆಟ್ಟಿಲಾಗಲಿದೆ’ ಎಂದು ಇಲ್ಲಿ ಗುರುವಾರ ಸುದ್ದಿಗಾರರಿಗೆ ಹೇಳಿದರು.

ಮುಂದಿನ 10 ದಿನಗಳಲ್ಲಿ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.