ADVERTISEMENT

‘ಐತಿಹಾಸಿಕ ಸ್ಮಾರಕಗಳನ್ನು ದತ್ತು ನೀಡಲು ಸಿದ್ಧ’

ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್ ಬಿ.ಪಿ.ರೇಖಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2024, 6:50 IST
Last Updated 27 ಜುಲೈ 2024, 6:50 IST
ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಈಚೆಗೆ ನಡೆದ ಪ್ರಾಚೀನ ಸ್ಮಾರಕಗಳ ಮಹತ್ವದ ಕುರಿತ ಕಾರ್ಯಕ್ರಮದಲ್ಲಿ ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್ ಬಿ.ಪಿ ರೇಖಾ ಮಾತನಾಡಿದರು.
ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಈಚೆಗೆ ನಡೆದ ಪ್ರಾಚೀನ ಸ್ಮಾರಕಗಳ ಮಹತ್ವದ ಕುರಿತ ಕಾರ್ಯಕ್ರಮದಲ್ಲಿ ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್ ಬಿ.ಪಿ ರೇಖಾ ಮಾತನಾಡಿದರು.   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಐತಿಹಾಸಿಕ ಸ್ಮಾರಕಗಳನ್ನು ದತ್ತು ಪಡೆದು ನಿರ್ವಹಿಸಲು ಸಂಘ, ಸಂಸ್ಥೆಗಳು ಸಿದ್ದರಿದ್ದರೆ ಅದಕ್ಕೆ ಅವಕಾಶ ಇದೆ ಎಂದು ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್ ಬಿ.ಪಿ ರೇಖಾ ತಿಳಿಸಿದರು.

ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಈಚೆಗೆ ನಡೆದ ಪ್ರಾಚೀನ ಸ್ಮಾರಕಗಳ ಮಹತ್ವದ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊಡಗಿನಲ್ಲಿ ನೂರಾರು ಪ್ರಾಚೀನ ಸ್ನಾರಕಗಳಿದ್ದು ಇವುಗಳ ಸಂರಕ್ಷಣೆ ನಿಟ್ಟಿನಲ್ಲಿ ಸಾರ್ವಜನಿಕರೂ ಅಗತ್ಯ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ADVERTISEMENT

ವೀರಗಲ್ಲು, ಮಾಸ್ತಿಗಲ್ಲು ಸೇರಿದಂತೆ ಪ್ರಾಚೀನ ದೇವಾಲಯಗಳು, ಶಿಲೆಗಳು ಕಂಡುಬಂದಲ್ಲಿ ಅವುಗಳ ಬಗ್ಗೆ ಮಾಹಿತಿಯನ್ನು ಕೊಡಗು ಜಿಲ್ಲಾ ಪ್ರಾಚ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಗೆ ನೀಡುವಂತೆಯೂ ರೇಖಾ ವಿನಂತಿಸಿದರು.

ಪ್ರಾಚೀನ ಸ್ಮಾರಕಗಳು ನಮ್ಮ ದೇಶದ ಭವ್ಯ ಇತಿಹಾಸದ ಮಹತ್ವವನ್ನು ಸಾರಿಹೇಳುತ್ತವೆ. ಇಂತಹ ಸ್ಮಾರಕಗಳ ಸಂರಕ್ಷಣೆ ಭವಿಷ್ಯದ ದೖಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂರಕ್ಷಣೆಗೆ ಸಾರ್ವಜನಿಕರೂ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.

ಕೊಡಗು ಜಿಲ್ಲೆಯಲ್ಲಿ ಈವರೆಗೆ ದೊರಕಿದ ಅನೇಕ ಪ್ರಾಚೀನ ಮಹತ್ವದ ಸ್ಮಾರಕಗಳ ಪ್ರಾತ್ಯಕ್ಷಿಕೆಯೊಂದಿಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ರೋಟರಿ ವುಡ್ಸ್ ಅಧ್ಯಕ್ಷ ಕಿಗ್ಗಾಲು ಹರೀಶ್, ಕಾರ್ಯದರ್ಶಿ ಕಿರಣ್ ಕುಂದರ್, ಸಹಾಯಕ ಗವರ್ನರ್ ದೇವಣಿರ ಕಿರಣ್, ರೋಟರಿ ವುಡ್ಸ್ ಮಾಜಿ ಅಧ್ಯಕ್ಷ ಎಸ್.ಎಸ್.ಸಂಪತ್ ಕುಮಾರ್, ವಸಂತ್ ಕುಮಾರ್ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.