ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ಒಟ್ಟು 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು, ನಿವೃತ್ತ ಗ್ರಾಮ ಲೆಕ್ಕಿಗ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಕುಶಾಲನಗರ ಸಮೀಪದ ಮಾದಾಪಟ್ಟಣದ ಬಸವೇಶ್ವರ ದೇಗುಲ ಬಳಿ, ನಾಗಣ್ಣ ಎಂಬುವವರು ಮರಗೆಣಸು ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆದಿದ್ದರು. 6 ಕೆ.ಜಿ ಗಾಂಜಾ ವಶಕ್ಕೆ ಪಡೆದು, ನಾಗಣ್ಣ ಅವರನ್ನು ಬಂಧಿಸಲಾಗಿದೆ.
ಮಣಜೂರು ಬಸ್ ನಿಲ್ದಾಣದ ಬಳಿ ಗಾಂಜಾ ಮಾರುತ್ತಿದ್ದ ನಿವೃತ್ತ ಗ್ರಾಮ ಲೆಕ್ಕಿಗ ಲಕ್ಷ್ಮಪ್ಪ ಅವರನ್ನೂ ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.