ADVERTISEMENT

ಗಾಂಜಾ ಮಾರಾಟ: ನಿವೃತ್ತ ಗ್ರಾಮ ಲೆಕ್ಕಿಗ ಬಂಧನ

ಕೊಡಗು ಜಿಲ್ಲೆಯಲ್ಲೂ 8 ಕೆ.ಜಿ ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 17:02 IST
Last Updated 5 ಸೆಪ್ಟೆಂಬರ್ 2020, 17:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ಒಟ್ಟು 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು, ನಿವೃತ್ತ ಗ್ರಾಮ ಲೆಕ್ಕಿಗ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಕುಶಾಲನಗರ ಸಮೀಪದ ಮಾದಾಪಟ್ಟಣದ ಬಸವೇಶ್ವರ ದೇಗುಲ ಬಳಿ, ನಾಗಣ್ಣ ಎಂಬುವವರು ಮರಗೆಣಸು ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆದಿದ್ದರು. 6 ಕೆ.ಜಿ ಗಾಂಜಾ ವಶಕ್ಕೆ ಪಡೆದು, ನಾಗಣ್ಣ ಅವರನ್ನು ಬಂಧಿಸಲಾಗಿದೆ.

ಮಣಜೂರು ಬಸ್‌ ನಿಲ್ದಾಣದ ಬಳಿ ಗಾಂಜಾ ಮಾರುತ್ತಿದ್ದ ನಿವೃತ್ತ ಗ್ರಾಮ ಲೆಕ್ಕಿಗ ಲಕ್ಷ್ಮಪ್ಪ ಅವರನ್ನೂ ಬಂಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.