
ನಾಪೋಕ್ಲು: ‘ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ’ ಎಂದು ಕಕ್ಕಬೆ ಕೇಂದ್ರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೇಟೋಳಿರ ಪಿ. ಕುಟ್ಟಪ್ಪ ಹೇಳಿದರು.
ಕಕ್ಕಬೆ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪೈಯಡಿ ಹಂಸ ,ಬಾತ್ಮೀದಾರ ಕಲ್ಯಾಟಂಡ ಸುಧಾ ಗಣಪತಿ, ನಿರ್ದೇಶಕರಾದ ಬೊಳಿಯಾಡಿರ ಸಂತು ಸುಬ್ರಮಣಿ, ಅಂಜಪರವಂಡ ಎ. ಕುಶಾಲಪ್ಪ, ಮುಕ್ಕಾಟಿರ ರಮೇಶ್, ನೈಲ್ ಚಂಗಪ್ಪ, ಪರದಂಡ ಪ್ರಮೀಳಾ ಪೆಮ್ಮಯ್ಯ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಕೆ.ಬಿ. ಲೀಲಾವತಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಕಕ್ಕಬ್ಬೆ-ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್ ಧ್ವಜಾರೋಹಣ ನೆರವೇರಿಸಿದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ನಿರ್ದೇಶಕ ಬೊಳಿಯಾಡಿರ ಸಂತುಸುಬ್ರಮಣಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಅನಿಲ್ ರಾಜ್ ವರದಿ ವಾಚಿಸಿದರು. ಶಿಕ್ಷಕಿ ಪಿ.ಸಿ.ಬಬಿತ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶರತ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.