ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮುಖ ಆರೋಪಿಗಾಗಿ ಚುರುಕುಗೊಂಡ ಶೋಧ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2022, 11:07 IST
Last Updated 3 ನವೆಂಬರ್ 2022, 11:07 IST
   

ಮಡಿಕೇರಿ: ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಇಲ್ಲಿನ ಗದ್ದಿಗೆ ಸಮೀಪದ ನಿವಾಸಿ ತುಫೈಲ್‌ಗಾಗಿ ಪೊಲೀಸರು ಶೋಧಕಾರ್ಯವನ್ನು ಚುರುಕುಗೊಳಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಏಜೆನ್ಸಿ ಈತನ ಸುಳಿವು ನೀಡಿದವರಿಗೆ ₹ 5 ಲಕ್ಷ ಬಹುಮಾನ ಘೋಷಿಸಿದೆ. ಪೊಲೀಸರು ಮಡಿಕೇರಿ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಜಾಲಾಡಿದರೂ ಆತನ ಸುಳಿವು ಲಭ್ಯವಾಗುತ್ತಿಲ್ಲ.

ವಿದೇಶಕ್ಕೆ ತೆರಳಿರುವ ಶಂಕೆಯೂ ಇದ್ದು, ಈ ಹಿನ್ನೆಲೆಯಲ್ಲೂ ನಿಗಾ ವಹಿಸಲಾಗಿದೆ. ಸೆಪ್ಟೆಂಬರ್‌ನಲ್ಲೂ ಎನ್‌ಐಎ ಎರಡು ಬಾರಿ ನಗರದಲ್ಲಿ ಶೋಧ ಕಾರ್ಯ ನಡೆಸಿ ಬರಿಗೈಯಲ್ಲಿ ವಾಪಸ್ ತೆರಳಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.