ADVERTISEMENT

ಮಡಿಕೇರಿಯಲ್ಲಿ ವ್ಯಾಪಕ ತಪಾಸಣೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 11:35 IST
Last Updated 22 ನವೆಂಬರ್ 2022, 11:35 IST
   

ಮಡಿಕೇರಿ: ನಗರದಲ್ಲಿ ಸೋಮವಾರ ಬಾಂಬ್ ನಿಷ್ಕ್ರಿಯ ದಳ ಹಾಗೂ ಇತರೆ ಪೊಲೀಸ್ ಸಿಬ್ಬಂದಿ ವ್ಯಾಪಕ ತಪಾಸಣೆ ನಡೆಸಿದರು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸೇರಿದಂತೆ ಹಲವೆಡೆ ತಪಾಸಣೆ ನಡೆಯಿತು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ‘ಜನರು ಹೆಚ್ಚು ಸೇರುವ ಕಡೆ ಪ್ರತಿವಾರವೂ ತಪಾಸಣೆ ನಡೆಸಲಾಗುತ್ತದೆ. ಇದಕ್ಕೂ ಮಂಗಳೂರು ಸ್ಫೋಟ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಕೊಡಗು ಜಿಲ್ಲೆಯಾದ್ಯಂತ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT