ವಿರಾಜಪೇಟೆ: ಸಮೀಪದ ಹೆಗ್ಗಳದ ಪಾಲ್ಟ್ ಮಕ್ಕಿ ನಾಗಬನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ಸೋಮವಾರ ವಿಶೇಷ ಪೂಜಾ ಕಾರ್ಯಗಳು ನಡೆದವು.
ಅರ್ಚಕ ವೇಣುಗೋಪಾಲ್ ಭಟ್ ಅವರು ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಸಂಕಲ್ಪ ಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಈ ಸಂದರ್ಭ ಮಾಡಲಾಯಿತು. ನಾಗನ ಮೂರ್ತಿಗೆ ಸೀಯಾಳ ಮತ್ತು ಹಾಲಿನ ಅಭಿಷೇಕ ಹಾಗೂ ನಾಗತಂಬಿಲವನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಮಹಾಪೂಜೆಯ ನಂತರ ಪ್ರಸಾದ ವಿನಿಯೋಗ ನಡೆಯಿತು. ಅನ್ನ ಸಂತರ್ಪಣಾ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಸಮೀಪದ ಬೇಟೋಳಿ, ಹೆಗ್ಗಳ, ಬೂದಿಮಾಳ, ರಾಮನಗರ, ವಿರಾಜಪೇಟೆ ಭಾಗದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.