ಶನಿವಾರಸಂತೆ: ಡಾ.ಶಿವಕುಮಾರ್ ಸ್ವಾಮೀಜಿ ಬಗ್ಗೆ ಫೇಸ್ ಬುಕ್ಕಿನಲ್ಲಿ ಅವಹೇಳನಕಾರಿ ಬರಹ ಹಾಕಿರುವವನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೊಡ್ಲಿಪೇಟೆ ಹೋಬಳಿ ವೀರಶೈವ ಸಮಾಜದ ಅಧ್ಯಕ್ಷ ಬಿ.ಕೆ.ಯತೀಶ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮನೀಷ್ ಮಣಿಕಂಠ ‘ನಡೆದಾಡುವ ದೇವರು ಯಾರು ? ’ ಎಂದು ಪ್ರಶ್ನಿಸಿ, ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ ಹಾಕಿದವ್ಯಕ್ತಿ.
ಮನೀಷ್ ಮಣಿಕಂಠ ಎಂಬಾತ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾನೆ. ಇಂತಹ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.ಇಲ್ಲವಾದಲ್ಲಿ ಕೊಡ್ಲಿಪೇಟೆ ಹೋಬಳಿ ವೀರಶೈವ ಸಮಾಜ ಹಾಗೂ ವಿವಿಧ ಸಮುದಾಯದ ವತಿಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಯತೀಶ್ ದೂರಿನಲ್ಲಿ ಎಚ್ಚರಿಸಿದ್ದಾರೆ.
ಡಾ.ಶಿವಕುಮಾರ ಸ್ವಾಮೀಜಿ ಅವರು ಅನಾರೋಗ್ಯದಿಂದ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.