ADVERTISEMENT

ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿ ಸೆರೆ: ಚಿಕಿತ್ಸೆಗಾಗಿ ಮೈಸೂರಿನ ಮೃಗಾಲಯಕ್ಕೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 15:03 IST
Last Updated 17 ಜನವರಿ 2023, 15:03 IST
ಅನಾರೋಗ್ಯಕ್ಕೀಡಾಗಿದ್ದ ಹುಲಿ
ಅನಾರೋಗ್ಯಕ್ಕೀಡಾಗಿದ್ದ ಹುಲಿ    

ಸಿದ್ದಾಪುರ (ಕೊಡಗು): ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷ ಪ್ರಾಯದ ಗಂಡು ಹುಲಿಯೊಂದನ್ನು ಇಲ್ಲಿನ ಮಾಲ್ದಾರೆ ಗ್ರಾಮದ ಆಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಹುಲಿಯನ್ನು ಕಳುಹಿಸಿಕೊಡಲಾಗಿದೆ.

ಸಾಕಾನೆಗಳಾದ ಪ್ರಶಾಂತ, ಸುಗ್ರೀವ, ಶ್ರೀರಾಮ, ಹರ್ಷ, ವಿಕ್ರಂ, ಈಶ್ವರ ಆನೆಗಳ ಸಹಕಾರದೊಂದಿಗೆ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡರು. ವನ್ಯಜೀವಿ ವೈದ್ಯಾಧಿಕಾರಿ ಡಾ.ರಮೇಶ್ ಹಾಗೂ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್ ಹುಲಿಗೆ ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದರು. ಕೆಲಕಾಲ ಓಡಿದ ಹುಲಿ, ಬಳಿಕ ಅಸ್ತಾನ ಗ್ರಾಮದ ಬಳಿ ನಿತ್ರಾಣಗೊಂಡು ಬಿದ್ದಿತು. ನಂತರ, ಹುಲಿಯನ್ನು ಬಲೆ ಹಾಕಿ ಹಿಡಿಯಲಾಯಿತು. ಹುಲಿಯ‌ ಹಲ್ಲು ಹಾಗೂ ಕಾಲಿನ ಭಾಗದಲ್ಲಿ ಗಾಯವಾಗಿದ್ದು, ಆಹಾರ ಸೇವನೆ ಮಾಡದಿರುವುದರಿಂದ ಹುಲಿ ಸಾಕಷ್ಟು ಬಳಲಿದೆ. ವನ್ಯಜೀವಿ ವೈದ್ಯಾದಿಕಾರಿ ಡಾ.ಚಿಟ್ಟಿಯಪ್ಪ ಹಾಗೂ ಡಾ.ರಮೇಶ್ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಆರೈಕೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳುಹಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT