ADVERTISEMENT

ಸಿದ್ದಾಪುರ: ಅರಣ್ಯಕ್ಕೆ ತೆರಳಿದ ಕಾಡಾನೆ ಹಿಂಡು

​ಪ್ರಜಾವಾಣಿ ವಾರ್ತೆ
Published 10 ಮೇ 2025, 13:54 IST
Last Updated 10 ಮೇ 2025, 13:54 IST
ಕಾಡಾನೆ ಹಿಂಡು ಅರಣ್ಯಕ್ಕೆ ತೆರಳಿದವು
ಕಾಡಾನೆ ಹಿಂಡು ಅರಣ್ಯಕ್ಕೆ ತೆರಳಿದವು   

ಸಿದ್ದಾಪುರ: ಚೆನ್ನಯ್ಯನಕೋಟೆ ವ್ಯಾಪ್ತಿಯ ಚೆನ್ನಂಗಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದರು.

 ಈ ಭಾಗದ ಕಾಫಿ ತೋಟದಲ್ಲಿ ಮರಿ ಆನೆ ಸೇರಿದಂತೆ 15ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದವು. ಕಾಫಿ ತೋಟದಲ್ಲಿ ಕೃಷಿ ನಾಶ ಮಾಡುತ್ತಿರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ನೀಡಿದ ದೂರಿನ ಅನ್ವಯ ಸಿಬ್ಬಂದಿ ಶನಿವಾರ ಕಾರ್ಯಾಚರಣೆ ನಡೆಸಿದರು.

ಕಾರ್ಯಾಚರಣೆಯಲ್ಲಿ ತಿತಿಮತಿ ಉಪವಲಯ ಅರಣ್ಯಾಧಿಕಾರಿ ಶಶಿ, ಆರ್.ಆರ್.ಟಿ ತಂಡದ ಸಿಬ್ಬಂದಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.