ADVERTISEMENT

ಮಾಂಸ ಸೇವಿಸಿ ದೇವಾಲಯಕ್ಕೆ ಸಿದ್ದರಾಮಯ್ಯ? ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2022, 15:51 IST
Last Updated 21 ಆಗಸ್ಟ್ 2022, 15:51 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಮಡಿಕೇರಿ: ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಲು ಬಂದಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಂಸಾಹಾರ ಸೇವಿಸಿ ಕೊಡ್ಲಿಪೇಟೆಯ ಬಸವೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದರು ಎಂದು ಆರೋಪಿಸಲಾಗುತ್ತಿದೆ. ಈ ಬಗ್ಗೆ ಸಂದೇಶಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿವೆ.

ಪಕ್ಷದ ಮುಖಂಡರೊಬ್ಬರ ಮನೆಯಲ್ಲಿ ಸಿದ್ಧಪಡಿಸಿದ್ದ ನಾಟಿ ಕೋಳಿ ಭೋಜನವನ್ನು ಸುದರ್ಶನ ಪ್ರವಾಸಿ ಮಂದಿರದಲ್ಲಿ ಸಿದ್ದರಾಮಯ್ಯ ಸೇವಿಸಿದ್ದರು. ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ತಿನ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ‘ಅಂದು ನಾಟಿಕೋಳಿ ಸಾಂಬಾರು ತೆಗೆದುಕೊಂಡು ಹೋಗಿದ್ದು ನಿಜ. ಆದರೆ, ಕೊಡಗಿನ ವಿಶೇಷ ಅಡುಗೆಯಾದ ಕಣಿಲೆ ಸಾರು, ಅಕ್ಕಿರೊಟ್ಟಿಯನ್ನಷ್ಟೇ ಸೇವಿಸಿದ್ದರು. ಮಾಂಸ ತಿಂದಿರಲಿಲ್ಲ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.