ADVERTISEMENT

ಪರೀಕ್ಷಾ ಭಯ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಮೇ 2020, 14:57 IST
Last Updated 19 ಮೇ 2020, 14:57 IST

ಶನಿವಾರಸಂತೆ: ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಗ್ರಾಮದಲ್ಲಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಪರೀಕ್ಷಾ ಭೀತಿಯಿಂದ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶನಿವಾರಸಂತೆಯ ಭಾರತಿ ವಿದ್ಯಾಸಂಸ್ಥೆಯ ಪ್ರೌಢಶಾಲೆ ವಿದ್ಯಾರ್ಥಿ, ಗಾರೆ ಕೆಲಸದ ಕಾರ್ಮಿಕ ಜಿತೇಂದ್ರ ಅವರ ಪುತ್ರ ರಿಷಿ (15) ಆತ್ಮಹತ್ಯೆ ಮಾಡಿಕೊಂಡವನು.

ಪರೀಕ್ಷೆ ದಿನಾಂಕ ಪ್ರಕಟವಾದ ಬಳಿಕ ಆತಂಕಕ್ಕೆ ಒಳಗಾಗಿದ್ದ. ತಂದೆ, ತಾಯಿ ಕೆಲಸಕ್ಕೆ ಹೋದ ಬಳಿಕ ನೇಣು ಹಾಕಿಕೊಂಡಿದ್ಣಿದಾನೆ.ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.