ADVERTISEMENT

ಮಡಿಕೇರಿ: ಸ್ಮಗ್ಲರ್‌ಗಳಿಂದ ಎರಡು ನಕ್ಷತ್ರ ಆಮೆಗಳು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 16:22 IST
Last Updated 28 ಜುಲೈ 2022, 16:22 IST
ನಕ್ಷತ್ರ ಆಮೆಗಳು
ನಕ್ಷತ್ರ ಆಮೆಗಳು   

ಮಡಿಕೇರಿ: ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ನಗರದಲ್ಲಿ ಗುರುವಾರ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಎರಡು ಆನೆದಂತ ಹಾಗೂ ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡು, ಐವರನ್ನು ಬಂಧಿಸಿದ್ದಾರೆ.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂಭಾಗದ ರಸ್ತೆಯಲ್ಲಿರುವ ಮುಳಿಯ ಬಸ್‌ ತಂಗುದಾಣದಲ್ಲಿ ಮಹದೇವಸ್ವಾಮಿ, ಜಿ.ಗುರು ಹಾಗೂ ಪಿ.ಹೇಮಂತರಾಜ್ ಎಂಬುವವರು ಎರಡು ಆನೆದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಅವರನ್ನು ಬಂಧಿಸಲಾಯಿತು.

ಮಡಿಕೇರಿಯ ಕನ್ನಂಡ ಪಡೆಬಿರ ವೃತ್ತದ ಬಳಿಯ ಬಸ್ ತಂಗುದಾಣದಲ್ಲಿ ಸುರೇಶ್ ಮತ್ತು ಶರವಣನ್ ಎಂಬುವವರು ಎರಡು ಜೀವಂತ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಎಸ್‌.ಪಿ. ಶ್ರೀನಿವಾಸ್‌ರೆಡ್ಡಿ ಅವರ ನೇತೃತ್ವದಲ್ಲಿ ಸಬ್‌ಇನ್‌ಸ್ಪೆಕ್ಟರ್ ಸಿ.ಯು.ಸವಿ, ಹೆಡ್‌ಕಾನ್‌ಸ್ಟೆಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ್, ಕಾನ್‌ಸ್ಪೆಬಲ್‌ಗಳಾದ ಮಂಜುನಾಥ್ ಕಾರ್ಯಾಚರಣೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.