ADVERTISEMENT

ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಮುನೀರ್ ಅಹಮ್ಮದ್‌

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 6:04 IST
Last Updated 28 ಆಗಸ್ಟ್ 2024, 6:04 IST
ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ‌ ಕರ್ನಾಟಕ ಜನಪದ ಪರಿಷತ್ ತಾಲ್ಲೂಕು ಘಟಕ ವತಿಯಿಂದ ಏರ್ಪಡಿಸಿದ್ದ ವಿದ್ಯಾರ್ಥಿಗಳತ್ತ ಜಾನಪದ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ‌ ನೀಡಲಾಯಿತು
ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ‌ ಕರ್ನಾಟಕ ಜನಪದ ಪರಿಷತ್ ತಾಲ್ಲೂಕು ಘಟಕ ವತಿಯಿಂದ ಏರ್ಪಡಿಸಿದ್ದ ವಿದ್ಯಾರ್ಥಿಗಳತ್ತ ಜಾನಪದ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ‌ ನೀಡಲಾಯಿತು   

ಕುಶಾಲನಗರ: ಕರ್ನಾಟಕ ಜನಪದ ಪರಿಷತ್ ತಾಲ್ಲೂಕು ಘಟಕ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ‌ ‘ವಿದ್ಯಾರ್ಥಿಗಳತ್ತ ಜಾನಪದ’ ಎಂಬ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜಾನಪದ ಪರಿಷತ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್‌ ಮಾತನಾಡಿ, ‘ಜನಪದ‌ ಎಂಬುದು ನಿಂತ ನೀರಲ್ಲ. ಶಾಲೆಯ ಮೆಟ್ಟಿಲು ಹತ್ತದಿದ್ದರೂ ಜೀವನದ ಪಾಠಶಾಲೆಯಲ್ಲಿ ಎಲ್ಲಾ ರೀತಿಯ ಜ್ಞಾನ ಪಡೆದವರು ಜನಪದರು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಜ್ಞಾನ ವೃದ್ಧಿಸುವ ಇತರೆ ಪುಸ್ತಕಗಳನ್ನು ಕೂಡ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಿದೆ. ಜನಪದ ಸಾಹಿತ್ಯದಲ್ಲಿ ಅಡಕಗೊಂಡಿರುವ ನೀತಿಯ ತಿರುಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದರು.

ತಾಲ್ಲೂಕು ಜಾನಪದ ಪರಿಷತ್ ಘಟಕದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಯುವ ಪೀಳಿಗೆಗೆ ಜಾನಪದ ಸಂಸ್ಕೃತಿ, ಸೊಗಡನ್ನು ಪರಿಚಯಿಸುವ ಕಾರ್ಯವನ್ನು ಪರಿಷತ್ ಮೂಲಕ ಕಳೆದ‌ 9 ವರ್ಷಗಳಿಂದ ನಿರಂತರವಾಗಿ ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.

ADVERTISEMENT

ಕಲಾವಿದ ನಂಜುಂಡಸ್ವಾಮಿ ಮಾತನಾಡಿದರು. ಪದವಿಪೂರ್ವ ಕಾಲೇಜು ಉಪನ್ಯಾಸಕ ಫಿಲಿಪ್ ವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭ ಜನಪದ ಪರಿಷತ್ ಸದಸ್ಯತ್ವ ನೋಂದಣಿ ಕಾರ್ಯ ನಡೆಸಲಾಯಿತು. ಗಾಯಕ ನಂಜುಂಡಸ್ವಾಮಿ ಹಾಗೂ ಉಪನ್ಯಾಸಕ ನಂದೀಶ್ ಜಾನಪದ ಗೀತೆ ‌ಹಾಡಿದರು.

ಪರಿಷತ್ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಹಾ.ತಿ.ಜಯಪ್ರಕಾಶ್, ಪತ್ರಕರ್ತರ ಸಂಘದ ಉಪಾಧ್ಯಕ್ಷ ರಾಜು ರೈ, ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರ ಮೋಹನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.