ಮಡಿಕೇರಿ: ಇಲ್ಲಿನ ಜೂನಿಯರ್ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು ಹಾಗೂ ಕಾಲೇಜು ಪ್ರಾಂಶುಪಾಲ ವಿಜಯ ಅವರ ನಡುವೆ ಶುಕ್ರವಾರ ವಾಗ್ವಾದ ನಡೆಯಿತು.
ವಿದ್ಯಾರ್ಥಿನಿಯರು ಕೊಠಡಿ ಪ್ರವೇಶಿಸಲು ಮುಂದಾದ ವೇಳೆ ಪ್ರಾಂಶುಪಾಲರು ಅದಕ್ಕೆ ಅವಕಾಶ ನೀಡಲಿಲ್ಲ. ಈ ಸಂದರ್ಭದಲ್ಲಿ ವಾಗ್ವಾದ ನಡೆಯಿತು.
ಹೈಕೋರ್ಟ್ ಆದೇಶದಂತೆ, 'ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ತರಗತಿಗೆ ಬರಲು ಅವಕಾಶ ಇಲ್ಲ' ಎಂದು ಪ್ರಾಂಶುಪಾಲರು ಹೇಳಿದರು. ಆದರೂ ವಿದ್ಯಾರ್ಥಿನಿಯರು ಪಟ್ಟು ಸಡಿಲಿಸಲಿಲ್ಲ.
ಬಳಿಕ ಪ್ರಾಂಶುಪಾಲರು 'ನಾನು ದೂರು ನೀಡುತ್ತೇನೆ; ಇವರನ್ನು ಬಂಧಿಸಿ' ಎಂದು ಸ್ಥಳದಲ್ಲಿದ್ದ ಪೊಲೀಸರಿಗೆ ತಿಳಿಸಿದರು. ಅಲ್ಲಿಂದ ವಿದ್ಯಾರ್ಥಿನಿಯರು ವಾಪಸಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.