ಸುಳ್ಯ: ಸಂಪಾಜೆ ಭಾಗದಲ್ಲಿ ಸೋಮವಾರ ಮತ್ತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಭಾರಿ ಹಾನಿ ಸಂಭವಿಸಿದೆ.
ಕೊಡಗಿನ ಗಡಿ ಭಾಗದಲ್ಲಿ ಸುರಿದ ಭಾರಿ ಮಳೆಗೆ ಕೊಯನಾಡು, ಚೆಂಬು ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು , ಮಾರ್ಪಡ್ಕ ಊರುಬೈಲು ಸೇತುವೆಯ ಎರಡೂ ಬದಿ ಕುಸಿತವಾಗಿದ್ದು, ಕೊಯನಾಡಿನಲ್ಲಿ ಕಿಂಡಿ ಅಣೆಕಟ್ಟಿಗೆ ಬೃಹತ್ ಗಾತ್ರದ ಮರದ ದಿಮ್ಮಿಗಳು ಬಂದು ಅಡ್ಡಲಾಗಿ ನಿಂತಿದ್ದು, ಈ ಪರಿಸರದ ಹಲವು ಮನೆಗಳು ಜಲಾವೃತಗೊಂಡಿದೆ.
ಚೆಂಬು ಗ್ರಾಮದ ಆನೆಹಳ್ಳ ಎಂಬಲ್ಲಿ ಕಿಂಡಿ ಅಣೆಕಟ್ಟು ನೀರಿನಲ್ಲಿ ಕೊಚ್ಚಿಹೋಗಿದ್ದು , ದಬ್ಬಡ್ಕದಲ್ಲೂ ಗುಡ್ಡ ಕುಸಿದಿದ್ದು, ಸಮೀಪದ ರವಿ ಎಂಬವರ ಮನೆಗೆ ಹಾನಿ ಸಂಭವಿಸಿದೆ.
ಇತ್ತೀಚಿಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದ ಮಾರ್ಪಡ್ಕ – ಊರುಬೈಲು ಸೇತುವೆಯ ಎರಡೂ ಬದಿ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಈ ಪರಿಸರದ ಹಲವು ಕೃಷಿಕರ ಅಡಿಕೆ ತೋಟಗಳು ನೀರಿನಿಂದ ಆವೃತಗೊಂಡಿದೆ.
ಇವನ್ನೂ ಓದಿ:
ರಾಮನಗರ: ಅಂಡರ್ಪಾಸ್ ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು: ಗ್ರಾಮಸ್ಥರಿಂದ ರಕ್ಷಣೆ
ಚಾಮರಾಜನಗರ | ಧಾರಾಕಾರ ಮಳೆ; ಶಾಲಾ ಕಾಲೇಜುಗಳಿಗೆ ರಜೆ
PHOTOS | ರಾಮನಗರ: ಮುಳುಗಿದ ಕಾರುಗಳು, ಅಂಡರ್ಪಾಸ್ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು...
PHOTOS | ಚಾಮರಾಜನಗರ: ಧಾರಾಕಾರ ಮಳೆ; ಕೃಷಿ ಜಮೀನುಗಳಿಗೆ ನುಗ್ಗಿದ ನೀರು ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.