ಸುಂಟಿಕೊಪ್ಪ: ಪಟ್ಟಣ ಮತ್ತು ಗ್ರಾಮಗಳು ಸ್ವಚ್ಛತೆ ಹಾಗೂ ಆರೋಗ್ಯವಾಗಿರಬೇಕಾದರೆ ಪೌರಕಾರ್ಮಿಕರು ನಿರ್ವಹಿಸುವ ಕೆಲಸವೇ ಅನನ್ಯವಾದುದು ಎಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಹೇಳಿದರು.
ಇಲ್ಲಿನ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಶನಿವಾರ ನಡೆದ ಪಂಚಾಯಿತಿಯ ಪೌರ ಕಾರ್ಮಿಕರು ಹಾಗೂ ನೀರು ಗಂಟಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೌರಕಾರ್ಮಿಕರು ಹಾಗೂ ನೀರುಗಂಟಿಗಳ ಕೆಲಸ ಬಹಳ ಕಷ್ಟಕರವಾದದ್ದು. ಒಂದು ದಿನ ಕೆಲಸ ನಿರ್ವಹಿಸಿದಿದ್ದರೇ ಗ್ರಾಮವೂ ಸ್ವಚ್ಛತೆ ಹಾಗೂ ಆರೋಗ್ಯವಂತರಾಗಿ ಇರಲು ಸಾಧ್ಯವೇ ಇಲ್ಲ. ಅವರುಗಳು ನಿರ್ವಹಿಸುವ ಕಾರ್ಯವನ್ನು ಸಾಮಾನ್ಯ ನಾಗರೀಕರು ನಿರ್ವಹಿಸಲು ಸಾಧ್ಯವೇ ಇಲ್ಲವೆಂದರಲ್ಲದೆ ಅವರ ಸೇವೆಯನ್ನು ಮುಕ್ತ ಕಂಠದಿಂದ ಪ್ರಶಂಸಿದರು.
ಪಿಡಿಒ ವಿ.ಜಿ.ಲೋಕೇಶ್ ಮಾತನಾಡಿ, ಪಟ್ಟಣ ಪ್ರದೇಶಕ್ಕೆ ಹತ್ತಿರವಾಗಿರುವ ದೊಡ್ಡ ಗ್ರಾಮ ಪಂಚಾಯಿಗಳಲ್ಲಿ ಪೌರಕಾರ್ಮಿಕರ ಮತ್ತು ನೀರು ಗಂಟಿಗಳ ಸೇವೆಯಿದ್ದು ಇವರುಗಳು ಅವಿರತ ಪರಿಶ್ರಮದಿಂದ ನೈರ್ಮಲ್ಯ ಮುಕ್ತ ಪ್ರದೇಶವನ್ನಾಗಿ ದೈನಂದಿನ ಸೇವೆಯಿಂದಾಗಿ ಪ್ರತಿ ಬಡಾವಣೆಗಳು ಸ್ವಚ್ಛಂದವಾಗಿ ಕಾಣುತ್ತಿದೆ. ಆದರೆ ಪೌರಕಾರ್ಮಿಕರನ್ನು ಕಡೆಗಣಿಸದೆ ಗೌರವಯುಕ್ತವಾಗಿ ನಡೆಸಿಕೊಳ್ಳುವ ಕಾರ್ಯವು ನಡೆಯಬೇಕಿದೆ. ಪ್ರತಿಯೊಂದು ಸಂಘ ಸಂಸ್ಥೆಯ ಸಾಮಾಜಿಕ ವೇದಿಕೆಗಳಲ್ಲಿ ಪೌರಕಾರ್ಮಿಕರನ್ನು ಅಭಿನಂದಿಸಿ ಗೌರವಿಸುವ ಕಾರ್ಯವು ನಡೆಯುವಮತಾಗಬೇಕು.
. ಗ್ರಾಮದಲ್ಲಿ ಯಾವುದೇ ಸಮಸ್ಯೆಗಳು ಎದುರಾದಾಗ ಪ್ರಥಮವಾಗಿ ಪೌರ ಕಾರ್ಮಿಕರು ಮುಂಚೂಣಿಯಲ್ಲಿ ಕಾಣಸಿಗುತ್ತಾರೆ. ಗ್ರಾಮಸ್ಥರೊಂದಿಗೆ ಸೌಜನ್ಯತೆಯಿಂದ ವರ್ತಿಸಬೇಕು ಅದೇ ರೀತಿಯಲ್ಲಿ ಗ್ರಾಮದ ನಿವಾಸಿಗಳು ಸಹ ಸೌಜನ್ಯ ಗೌರವವನ್ನು ನೀಡಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದ ಮೊದಲಿಗೆ ಪಂಚಾಯಿತಿ ಪೌರಕಾರ್ಮಿಕರು ಹಾಗೂ ನೀರು ಗಂಟಿಗಳಾದ ಸಪಾಯಿ ಕರ್ಮಾಚಾರಿ ಸಂಘದ ಜಿಲ್ಲಾಧ್ಯಕ್ಷರಾದ ರಂಗಸ್ವಾಮಿ, ವೀರಭದ್ರ, ಮಣಿಕಂಠ, ಮುನಿಸ್ವಾಮಿ, ರಾಮಚಂದ್ರ, ವಿಶ್ವ, ರವಿ, ರಾಜ, ಮುರುಗೇಶ್, ರಮೇಶ ಅವರುಗಳಿಗೆ ಶಾಲು ಹೊದೆಸಿ ಫಲ ತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ, ಸದಸ್ಯರುಗಳಾದ ರಫೀಕ್ಖಾನ್, ಆಲಿಕುಟ್ಟಿ, ಶಬೀರ್, ಪ್ರಸಾದ್ಕುಟ್ಟಪ್ಪ, ಪಿ.ಎಫ್.ಸಬಾಸ್ಟೀನ್, ಶಾಂತಿ, ಮಂಜುಳಾ (ರಾಸಥಿ), ವಸಂತಿ, ಸಿಬ್ಬಂದಿಗಳಾದ ಲೆಕ್ಕ ಪರಿಶೋಧಕಿ ಚಂದ್ರಕಲಾ, ಕರವಸೂಲಿಗಾರ ಶ್ರೀನಿವಾಸ್, ಗಣಕಯಂತ್ರ ಸಿಬ್ಬಂದಿ ಡಿ.ಎಂ. ಮಂಜುನಾಥ್, ಸಂದ್ಯಾ, ಮಂದಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.