ಸೋಮವಾರಪೇಟೆ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ತಾಲ್ಲೂಕು ಮಟ್ಟದ ಪ್ರಕೃತಿ ವಿಕೋಪ ಸಭೆ ಮಂಗಳವಾರ ತಹಶೀಲ್ದಾರ್ ಕೃಷ್ಣಮೂರ್ತಿ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಪರಮೇಶಕುಮಾರ್ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಮತ್ತು ವಿಎ ಭಾಗವಹಿಸಿದ್ದರು. ಕಾರ್ಯಸೂಚಿಯ ಅನುಸಾರ ಪ್ರಗತಿ ವರದಿ ಪರಿಶೀಲನೆ, ಪ್ರಕೃತಿ ವಿಕೋಪ ಸಮಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.