ADVERTISEMENT

ಚಾಲಕರ ಒಕ್ಕೂಟದ ತಾಲ್ಲೂಕು ಅಧ್ಯಕ್ಷರಾಗಿ ಬಿ.ಜಿ.ಅಣ್ಣಯ್ಯ ಆಯ್ಕೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2024, 13:28 IST
Last Updated 29 ಜುಲೈ 2024, 13:28 IST
ಬಿ.ಜೆ.ಅಣ್ಣಯ್ಯ
ಬಿ.ಜೆ.ಅಣ್ಣಯ್ಯ   

ಕುಶಾಲನಗರ: ಕರ್ನಾಟಕ ಚಾಲಕರ ಒಕ್ಕೂಟದ ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಬಿ.ಜೆ ಅಣ್ಣಯ್ಯ ಆಯ್ಕೆಯಾಗಿದ್ದಾರೆ.

ಇಲ್ಲಿನ ಸಂಘದ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷ ಮುಜೀಬ್ ಅಧ್ಯಕ್ಷತೆಯಲ್ಲಿ ನಡೆದ‌ ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಎಸ್. ಎಸ್ ಫಯಾಜುದ್ದೀನ್ ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಉಪಾಧ್ಯಕ್ಷ ಕೆ. ಚಂದ್ರು, ಪ್ರಧಾನ ಕಾರ್ಯದರ್ಶಿ ರಿಯಾಜ್, ಖಜಾಂಚಿ ಮುರಳಿ, ಪ್ರಚಾರ ಸಮಿತಿ ಅಧ್ಯಕ್ಷ ಅಜಯ್, ಉಪಾಧ್ಯಕ್ಷರಾದ  ವಿಜಯ್, ಶಿವಾಜಿ, ಆನಂದ್ ಕುಮಾರ್, ನಾಗೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT