ನಾಪೋಕ್ಲು: ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸಿ ಕೈ ತೊಳೆಯಲೆಂದು ಹೋದ ಶಿಕ್ಷಕರೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಸಮೀಪದ ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಜಯ ಪೂವಣ್ಣ (55) ಅವರು ಕೊಂಡಂಗೇರಿ ಸಮೀಪದ ಕಾಫಿ ತೋಟಕ್ಕೆ ಮಂಗಳವಾರ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ.
ಪಾರಾಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ತೋಟದಿಂದ ಶಾಲೆಗೂ ತೆರಳದೆ, ಮನೆಗೂ ಹಿಂತಿರುಗದೆ ಇದ್ದುದರಿಂದ ಸಂಶಯಗೊಂಡ ಕುಟುಂಬಸ್ಥರು ಹುಡುಕಾಡಿದಾಗ ಕೆರೆಗೆ ಬಿದ್ದಿರುವುದು ಗೊತ್ತಾಗಿದೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಅಂತ್ಯಸಂಸ್ಕಾರ ಬುಧವಾರ ಕೊಳಕೇರಿ ಗ್ರಾಮದಲ್ಲಿ ಜರುಗಿತು.
ಅವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.